Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:7 - ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:7
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.


ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು