Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:9 - ಕನ್ನಡ ಸತ್ಯವೇದವು C.L. Bible (BSI)

9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:9
14 ತಿಳಿವುಗಳ ಹೋಲಿಕೆ  

“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು