Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:7 - ಕನ್ನಡ ಸತ್ಯವೇದವು C.L. Bible (BSI)

7 ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೂತರ ವಿಷಯದಲ್ಲಿ ಹೇಳುವದೇನೆಂದರೆ - ದೇವರು ತನ್ನ ದೂತರನ್ನು ಗಾಳಿಗಳನ್ನಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ದೆವ್‍ದುತಾಂಚ್ಯಾ ವಿಶಯಾತ್ ದೆವ್ ಮನ್ತಾ, “ದೆವ್ ಅಪ್ನಾಚ್ಯಾ ದುತಾಕ್ನಿ ವಾರ್ಯಾ ಸಾರ್ಕೆ ಕರ್‍ತಾ, ಅನಿ ಅಪ್ನಾಚ್ಯಾ ಸೆವಕಾಕ್ನಿ ಪೆಟ್ತಲ್ಯಾ ಅಗಿ ಸಾರ್ಕೆ ಕರ್‍ತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:7
10 ತಿಳಿವುಗಳ ಹೋಲಿಕೆ  

ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು