Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:1 - ಕನ್ನಡ ಸತ್ಯವೇದವು C.L. Bible (BSI)

1 ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:1
13 ತಿಳಿವುಗಳ ಹೋಲಿಕೆ  

ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.


ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.


ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು