Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19-20 ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19-20 ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19-20 ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಭಾವಾನು ಅನಿ ಭೆನಿಯಾನು ಜೆಜುಚ್ಯಾ ಮರ್‍ನಾ ವೈನಾ ಅಮ್ಕಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಲೊ ಸಗ್ಳೊ ಸ್ವತಂತ್ರ್ ಗಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:19
20 ತಿಳಿವುಗಳ ಹೋಲಿಕೆ  

ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕಬಲಿಯ ಅವಶ್ಯಕತೆ ಇಲ್ಲ.


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು