Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:1 - ಕನ್ನಡ ಸತ್ಯವೇದವು C.L. Bible (BSI)

1 ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಂಬಿಕೆಯೋ ನಾವು ನಿರೀಕ್ಷಿಸುವವುಗಳ ವಿಷಯವಾಗಿ ಭರವಸದಿಂದಿರುವದೂ ಕಣ್ಣಿಗೆ ಕಾಣದವುಗಳನ್ನು ನಿಜವೆಂದು ತಿಳುಕೊಳ್ಳುವದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ವಿಶ್ವಾಸ್, ಮನ್ತಲೊ ಅಮಿ ರಾಕುನ್ಗೆತ್ ಹೊತ್ತ್ಯಾ ವಿಶಯಾತ್ ಬರೊಸ್ಯಾನ್ ರಾತಲೆ ಅನಿ ಡೊಳ್ಯಾಕ್ ದಿಸಿನಸಲ್ಲೆ ಖರೆ ಮನುನ್ ಕಳ್ವುನ್ ಘೆತಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:1
24 ತಿಳಿವುಗಳ ಹೋಲಿಕೆ  

ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ:


ನಾನು ನಿಮಗೆ ಹೇಳಿರುವಂತೆ ನಿಮ್ಮ ಏರ್ಪಾಡೆಲ್ಲಾ ಮುಗಿದಿರಬೇಕು. ಇಲ್ಲದಿದ್ದರೆ ನಾನು ಬರುವಾಗ, ನನ್ನ ಜೊತೆಯಲ್ಲಿಯೇ ಮಕೆದೋನಿಯದ ಸಹೋದರರೂ ಬಂದು, ನೀವು ಸಿದ್ಧರಿಲ್ಲದೆ ಇರುವುದನ್ನು ಕಂಡರೆ ನೀವು ತಲೆತಗ್ಗಿಸಬೇಕಾಗುತ್ತದೆ. ನಿಮ್ಮಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ನಾನೂ ತಲೆ ತಗ್ಗಿಸಬೇಕಾಗುತ್ತದೆ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು