Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:27 - ಕನ್ನಡ ಸತ್ಯವೇದವು C.L. Bible (BSI)

27 ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ರಾಜಾಚ್ಯಾ ರಾಗಾಕ್ ಭಿಂಯಿನಸ್ತಾನಾ ವಿಶ್ವಾಸಾನ್ ಇಜಿಪ್ತ್ ದೆಶ್ ಸೊಡುನ್ ಗೆಲ್ಯಾನ್, ತೊ ದಿಸಿನಸಲ್ಯಾ ದೆವಾಕ್ ಬಗ್ತಲೊ ಮಟ್ಲ್ಯಾ ಸಾರ್ಕೆ ಘಟ್ಟ್ ಮನ್ ಕರುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:27
27 ತಿಳಿವುಗಳ ಹೋಲಿಕೆ  

ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ.


ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು