Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:32 - ಕನ್ನಡ ಸತ್ಯವೇದವು C.L. Bible (BSI)

32 ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಿಯಾ ಅನಿಬಿ ತುಮ್ಕಾ ಕಾಯ್ ಸಾಂಗು? ಗಿದಿಯೊನ್, ಬಾರಾಕ್, ಸಾಮ್ಸಾವ್, ಎಫಥ್, ದಾವಿದ್, ಸಾಮುಯೆಲ್ ಮನ್ತಲ್ಯಾಂಚ್ಯಾ ಸಾಟ್ನಿ ಅನಿ ಪ್ರವಾದಿಂಚ್ಯಾ ಸಾಟ್ನಿಬಿ ಸುಟ್ವುನ್ ಸಾಂಗುಕ್ ಮಾಕಾ ವೆಳ್ ಪಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:32
38 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.


ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.


ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು.


ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು