Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:33 - ಕನ್ನಡ ಸತ್ಯವೇದವು C.L. Bible (BSI)

33 ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಲೈ ಲೊಕಾನಿ ಮೊಟ್ಯಾ ವಿಶ್ವಾಸಾನುಚ್ ದುಸ್ರಿ ದುಸ್ರಿ ರಾಜಾ ಸ್ವತಾಚಿ ಕರುನ್ ಘೆಟ್ಲ್ಯಾನಿ, ನಿತ್ ಚಲ್ವುಲ್ಯಾನಿ,ದೆವಾಚಿ ಗೊಸ್ಟಿಯಾ ಘೆಟ್ಲ್ಯಾನಿ; ಅನಿ ಅದ್ಲ್ಯಾ ವಿಶ್ವಾಸಾನ್ ಸಿವಾಂಚಿ ತೊಂಡಾ ಭಾಂದ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:33
26 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು