Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:6 - ಕನ್ನಡ ಸತ್ಯವೇದವು C.L. Bible (BSI)

6 ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ವಿಶ್ವಾಸ್ ನಸ್ತಾನಾ ದೆವಾಕ್ ಮಾನ್ವುಕ್ ಹೊಯ್ನಾ, ದೆವಾಚ್ಯಾ ಜಗೊಳ್ ಯೆತಲೆ ದೆವ್ ಹಾಯ್ ಅನಿ ಅಪ್ನಾಕ್ ಹುಡಕ್ತಲ್ಯಾಕ್ನಿ ಪ್ರತಿ ಫಳ್ ದಿತಾ ಮನುನ್ ವಿಶ್ವಾಸ್, ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:6
47 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು