Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:7 - ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ವಿಶ್ವಾಸಾನುಚ್ ನೊಯೆನ್ ತವ್ಡ್ಯಾ ಪತರ್ ದಿಸಿನಸ್ತಾನಾ ಹೊತ್ತ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ದೆವಾಕ್ನಾ ಸಾಂಗ್ನಿ ಘೆವ್ನ್ ಭಕ್ತಿನ್ ಅಪ್ಲ್ಯಾ ಘರ್‍ಚ್ಯಾ ಲೊಕಾಂಚ್ಯಾ ರಾಕನಿ ಸಾಟ್ನಿ ಢೊನ್ ಬಾಂದ್ಲ್ಯಾನ್, ಅನಿ ಲೊಕಾಕ್ನಿ ಸಗ್ಳ್ಯಾಕ್ನಿ ಶಿಕ್ಷಾತ್ ಪಡ್ತಲೆ ಹೊಲ್ಲೆ ಮನುನ್ ದಾಕ್ವುನ್ ವಿಶ್ವಾಸಾಚೆ ಫಳ್ ಘೆವ್ಕ್ ಗುರಿ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:7
41 ತಿಳಿವುಗಳ ಹೋಲಿಕೆ  

ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.


ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.


ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.


ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು