Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:9 - ಕನ್ನಡ ಸತ್ಯವೇದವು C.L. Bible (BSI)

9 ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಕಾ ಶಿಕ್ಷಾ ದಿವ್ನ್ ಸಮಾ ವಾಟೆನ್ ಹಾನಿನಸಲ್ಲೆ ಆಂಗಾಕ್ ಸಮಂದ್ ಪಡಲೆ ಬಾಬಾ ಹಾತ್ ತೆಂಕಾ ಅಮಿ ಮಾನ್ ದಿತಾಂವ್, ತಸೆ ಹೊಲ್ಯಾರ್ ಆತ್ಮಿಕ್ ಬಾಬಾಕ್ ಸ್ವಿಕಾರ್ ಕರುನ್ ಜಿವ್ ಖಮ್ವುನ್ ಘೆವ್ವೆ ನ್ಹಯ್ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:9
28 ತಿಳಿವುಗಳ ಹೋಲಿಕೆ  

ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.


‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು