Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:12 - ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ಜೆಜುಬಿ ಅಪ್ನಾಚ್ಯಾ ರಗ್ತಾನ್ ಲೊಕಾಕ್ನಿ ಪವಿತ್ರ್ ಕರುಸಾಟಿ ಶಾರಾಚ್ಯಾ ಭಾಯ್ರ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:12
18 ತಿಳಿವುಗಳ ಹೋಲಿಕೆ  

ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು