Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಲೋಕದಲ್ಲಿ ಶಾಶ್ವತವಾಗಿರುವ ನಗರವೇ ಇಲ್ಲ. ಆದರೆ ನಾವು ಮುಂದೆ ಬರುವ ನಗರಕ್ಕಾಗಿ ಕಾಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಹಿತ್ತೆ ಅಮ್ಕಾ ಶಾಸ್ವಿತ್ ಶಾರ್ ನಾ, ಖರೆ ಯೆತಲೆ ಹಾಯ್ ತ್ಯಾ ಶಾರಾಚಿ ವಾಟ್ ಬಗಿತ್ ಹಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:14
18 ತಿಳಿವುಗಳ ಹೋಲಿಕೆ  

ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.


ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು