Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:15 - ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊಲ್ಯಾರ್ ಜೆಜುಚ್ಯಾ ವೈನಾ ದೆವಾಕ್ ಹೊಗ್ಳಾಪ್ ದಿತಲಿ ಬಲಿ ಅಮಿ ಸದ್ದಿಚ್ ಭೆಟ್ವುವಾ, ಹಿಚ್ ತೆಚೆ ನಾವ್ ಒಪ್ಪುನ್ ಘೆಟಲ್ಲ್ಯಾಂಚ್ಯಾ ಹೊಟ್ಟಾಂಚಿ ಉಪ್ಕಾರ್ ಸ್ತುತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:15
42 ತಿಳಿವುಗಳ ಹೋಲಿಕೆ  

ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II


ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು