Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:23 - ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅಮ್ಚ್ಯಾ ಭಾವಾ ತಿಮೊತಿಕ್ ಬಂದಿಖಾನ್ಯಾತ್ನಾ ಸುಟ್ಕಾ ಹೊಲ್ಲಿ ಹಾಯ್ ಮನ್ತಲೊ ವಿಶಯ್ ತುಮ್ಕಾ ಗೊತ್ತ್ ರ್‍ಹಾಂವ್ದಿತ್, ತೊ ಹಿತ್ತೆ ಯೆವ್ನ್ ಸಮಾ ಯೆಳಾರ್ ಪಾವ್ಲೊ ತರ್ ಮಿಯಾ ತುಮ್ಕಾ ಭೆಟುಕ್ ಯೆತಾನಾ ತೆಕಾಬಿ ವಾಂಗ್ಡಾ ಘೆವ್ನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:23
10 ತಿಳಿವುಗಳ ಹೋಲಿಕೆ  

ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.


ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು