Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:24 - ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಗ್ಳ್ಯಾ ತುಮ್ಚ್ಯಾ ಫಿಡಾರ್‍ಯಾಕ್ನಿ ಅನಿ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್ ಸಾಂಗ್ತಾ, ಅಮ್ಚಿ ಇಟಲಿ ದೆಶಾಚಿ ಭಾವಾ ಅನಿ ಭೆನಿಯಾ ತುಮ್ಕಾ ನಮಸ್ಕಾರ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:24
14 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.


ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!


ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು