Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:8 - ಕನ್ನಡ ಸತ್ಯವೇದವು C.L. Bible (BSI)

8 ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಅರಣ್ಯದೊಳಗೆ ದೇವರನ್ನು ಪರೀಕ್ಷಿಸಿದ ದಿನದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಚ್ಯಾ ವಾಟೆಕ್ ವ್ಹಾಕ್ಡೆ ಗೆಲ್ಲ್ಯಾ ತ್ಯಾ ಎಳಾರ್ ಕರಲ್ಲ್ಯಾ ಸಾರ್ಕೆ ತಸೆ ಮಟ್ಲ್ಯಾರ್, ಡಂಗ್ಳಿತ್ ಪರಿಕ್ಷಾಚ್ಯಾ ದಿಸಾತ್ನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ನಿಸ್ಟುರ್ ಕರುನಕಾಶಿ, ತುಮ್ಚ್ಯಾ ಪುರ್ವಜಾನಿ ದೆವಾಕ್ ವಿರೊದ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:8
28 ತಿಳಿವುಗಳ ಹೋಲಿಕೆ  

ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.


ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II


ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


“ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.


ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು