Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊಲ್ಯಾರ್ ಅಮಿ ಬೊಲುನ್ ಸಾಂಗ್ತಾಂವ್ ತೊ ವಿಶ್ವಾಸ್ ಅಮಿ ಘಟ್ ಸಂಬಾಳುನ್ ಘೆವ್ನ್ ರ್‍ಹಾವ್ವಾ; ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಎಕ್ ಶ್ರೆಸ್ಟ್ ಮೊಟೊ ಯಾಜಕ್ ಹಾಯ್‍, ದೆವಾಚ್ಯಾ ಇದ್ರಾಕ್ ಗೆಲ್ಲೊ ಜೆಜು ದೆವಾಚೊ ಲೆಕ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:14
31 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು