Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ದೆವಾಚ್ಯಾ ಲೊಕಾಕ್ನಿ ಸ್ವಾಗತ್‍ ಕರುನ್ ಬರೆ ಬಗುನ್ ಘೆಟ್ಲ್ಯಾಸಿ, ಅಜುನ್ ಬಿ ಬಗುಲ್ಲ್ಯಾಸಿ, ಹೆ ಕಾಮ್ ತುಮಿ ದೆವಾಚ್ಯಾ ನಾವಾಚ್ಯಾ ವಿಶಯಾತ್ ದಾಕ್ವುಲ್ಲೊ ಪ್ರೆಮ್, ಇಸ್ರುಕ್ ದೆವ್ ಇಸರ್‍ತಲೊ ನ್ಹಯ್, ಅನಿ ದೆವ್ ಅನ್ನ್ಯಾಯ್ ಕರ್ನಾರೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:10
48 ತಿಳಿವುಗಳ ಹೋಲಿಕೆ  

ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು