Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:13 - ಕನ್ನಡ ಸತ್ಯವೇದವು C.L. Bible (BSI)

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿಲ್ಲ್ಯಾ ತನ್ನಾ, ದೆವಾನ್‍ಕ್ಕಿಂತಾ ಮೊಟೊ ಕೊನ್ಬಿ ನಾ ಮನುನ್ ಸಾಂಗ್ಲ್ಯಾನ್, ಅನಿ ಅಪ್ನಾಚ್ಯಾ ಸ್ವತಾಚ್ಯಾ ನಾವಾ ವೈರುಚ್ ಆನ್ ಥವ್ನ್ ದಿಲ್ಲ್ಯಾ ಗೊಸ್ಟಿ ಸಾರ್ಕೆಚ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:13
15 ತಿಳಿವುಗಳ ಹೋಲಿಕೆ  

ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ I


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು