Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:11 - ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಲೆವಿಚ್ಯಾ ಘರಾನ್ಯಾಚ್ಯಾ ಯಾಜಕ್ ಕಾಮಾಚ್ಯಾ ವೈನಾ ಲೊಕಾಕ್ನಿ ದಿವ್ನ್ ಹೊತಾ, ಹೊಲ್ಯಾರ್ಬಿ ಯಾಜಕ್ ಕಾಮಾಕ್ನಾ ಲೊಕಾಕ್ನಿ ಆತ್ಮ್ಯಾನ್ ಸಂಪುರ್ನ್ ಕರುಕ್ ಹೊವ್ಕ್ ನಾ, ತಸೆ ಹೊವ್ನ್ ದುಸ್ರ್ಯಾ ನಮನಿಚೊ ಯಾಜಕ್ ಯೆತಲೊ ತೆಂಕಾ ಪಾಜೆಚ್ ಹೊವ್ನ್ ಹೊತ್ತೊ, ತಸೆ ಮಟ್ಲ್ಯಾರ್ ಮೆಲ್ಕಿಜೆದೆಕ್ ಸಾರ್ಕೊ ಯಾಜಕುಚ್ ಪಾಜೆ ಹೊಲ್ಲೊ, ಅನಿ ಆರೊನಾ ಸಾರ್ಕೊಸೊ ನ್ಹಯ್ ಮನ್ತಲೆ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:11
17 ತಿಳಿವುಗಳ ಹೋಲಿಕೆ  

ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ಹೀಗೆ ಕಾಣಿಸಿಕೊಂಡ ಯಾಜಕ ಮೆಲ್ಕಿಸದೇಕನನ್ನು ಹೋಲುವುದರಿಂದ ನಾವು ಹೇಳುವ ವಿಷಯ ಇನ್ನೂ ಸ್ಪಷ್ಟವಾಗುತ್ತದೆ.


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.


ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.


ಹೇಗೆಂದರೆ, ಮೆಲ್ಕಿಸದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ಇನ್ನೂ ಹುಟ್ಟಿರಲಿಲ್ಲವಾದರೂ ತತ್ವಶಃ ಆತನು ತನ್ನ ಪೂರ್ವಜ ಅಬ್ರಹಾಮನ ಉದರದಲ್ಲಿದ್ದನು.


ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.


ಇದನ್ನೆಲ್ಲಾ ಯಾರನ್ನು ಕುರಿತು ಹೇಳಲಾಗಿದೆಯೋ ಆ ವ್ಯಕ್ತಿ ಹುಟ್ಟಿದ್ದು ಬೇರೊಂದು ಕುಲದಲ್ಲಿ. ಆ ಕುಲದಲ್ಲಿ ಎಂದೂ ಯಾರೂ ಬಲಿಪೀಠದ ಸೇವೆ ಮಾಡಿದವರಲ್ಲ.


ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು