Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:16 - ಕನ್ನಡ ಸತ್ಯವೇದವು C.L. Bible (BSI)

16 ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕ್ರಿಸ್ತ ಯೇಸು ಯಾಜಕರಾದುದು ಅಳಿವಿಲ್ಲದ ಜೀವದ ಶಕ್ತಿಗೆ ಅನುಸಾರವಾಗಿದೆಯೇ ಹೊರತು ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜು ಯಾಜಕ್ ಹೊಲ್ಲೊ ಘರಾನಾಕ್ನಾ ಯೆಲ್ಲ್ಯಾ ನೆಮಾಂಚ್ಯಾ ಅನಿ ಶಾಸ್ತರಾಂಚ್ಯಾ ಸಾರ್ಕೊ ನ್ಹಯ್? ತೊ ನಾಸ್ ಹೊಯ್‍ ನಸಲ್ಲ್ಯಾ ಅಪ್ಲ್ಯಾ ಜಿವಾಚ್ಯಾ ಪಿಕಾಕ್ನಾ ಯಾಜಕ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:16
15 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


“ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕನು,” ಎಂದು ಪವಿತ್ರಗ್ರಂಥ ಸಮರ್ಥಿಸುತ್ತದೆ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಹೀಗೆ ಕಾಣಿಸಿಕೊಂಡ ಯಾಜಕ ಮೆಲ್ಕಿಸದೇಕನನ್ನು ಹೋಲುವುದರಿಂದ ನಾವು ಹೇಳುವ ವಿಷಯ ಇನ್ನೂ ಸ್ಪಷ್ಟವಾಗುತ್ತದೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು