Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:13 - ಕನ್ನಡ ಸತ್ಯವೇದವು C.L. Bible (BSI)

13 ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ಹೆ ನ್ಹವೊ ಕರಾರ್ ಕನ್ನಾಬಿ ಮನುನ್ ಸಾಂಗ್ಲ್ಯಾನ್, ತಸೆ ಹೊವ್ನ್ ಅದ್ದಿಚೊ ಕರಾರ್ ಜಿರ್ನ್ ಹೊವ್ನ್ ನಸ್ಟ್ ಹೊತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:13
15 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಇವುಗಳೆಲ್ಲವೂ ಅಳಿಯುತ್ತವೆ ನೀನಾದರೋ ಸದಾ ಉಳಿಯುವೆ. ಹಳತಾಗುವುವು ಇವೆಲ್ಲಾ ಬಟ್ಟೆಬರೆಯಂತೆ.


ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ : “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು