Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:6 - ಕನ್ನಡ ಸತ್ಯವೇದವು C.L. Bible (BSI)

6 ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ಅತ್ತಾ ಜೆಜು ಕ್ರಿಸ್ತಾಕ್ ದಿಲ್ಲೆ ಕಾಮ್ ತ್ಯಾ ಯಾಜಕಾಕ್ನಿ ದಿಲ್ಲ್ಯಾ ಕಾಮಾನ್‍ಬಿ ಲೈ ಕಿಮ್ತಿಚೆ ಹಾಯ್, ತಸೆಚ್ ಜೆಜುನ್ ಅಪ್ಲ್ಯಾ ಲೊಕಾಕ್ನಿ ದೆವಾಕ್ನಾ ಹಾನಲೊ ನ್ಹವೊ ಕರಾರ್ ಜುನ್ನಾಚ್ಯಾನ್ಬಿ ಕಿಮ್ತಿಚೊ, ಬರ್‍ಯಾ ಸಂಗ್ತಿಯಾಂಚ್ಯಾ ಗೊಸ್ಟಿಯಾ ವೈನಿ ನ್ಹವೊ ಕರಾರ್ ತಯಾರ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:6
13 ತಿಳಿವುಗಳ ಹೋಲಿಕೆ  

ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು