Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:9 - ಕನ್ನಡ ಸತ್ಯವೇದವು C.L. Bible (BSI)

9 ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ತೆಂಚ್ಯಾ ಬಾಬಾಂಚ್ಯಾಕ್ನಾ ಕರಲೊ ಸಾರ್ಕೊ ಕರಾರ್ ನ್ಹಯ್, ಮಿಯಾ ತೆಕಾ ಹಾತ್ ಧರುನ್ ಇಜಿಪ್ತಾಕ್ನಾ ಬಾಯ್ರ್ ಹಾನಲ್ಯಾ ವೆಳಾರ್ ತೆಂಚ್ಯಾ ವಾಂಗ್ಡಾ ಕರಾರ್ ಕರುನ್ ಘೆಟಲ್ಲೊ ಹೊಲ್ಯಾರ್, ತೆನಿ ತೆಚ್ಯಾ ಸಾರ್ಕೆ ಚಲುನ್ ಜಾವ್ಕ್ ಹೊವ್ಕ್ ನಾ, ತಸೆ ಮನುನ್ ಮಿಯಾ ತೆಂಚ್ಯಾಕ್ನಾ ದುಸ್ರ್ಯಾಕ್ಡೆ ಪರ್ತುನ್ ಬಸ್ಲೊ” ಮನುನ್ ದೆವ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:9
44 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.


ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.


ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು.


ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.


ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.


ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು