Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:26 - ಕನ್ನಡ ಸತ್ಯವೇದವು C.L. Bible (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:26
36 ತಿಳಿವುಗಳ ಹೋಲಿಕೆ  

ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ;


ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.


ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು