Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:4 - ಕನ್ನಡ ಸತ್ಯವೇದವು C.L. Bible (BSI)

4 ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಆಗ್ದಿ ಪವಿತ್ರ್ ಜಾಗ್ಯಾರ್ ಧುಪ್ ಜಾಳ್ವುಕ್ ಸೊನ್ಯಾಚೆ ಅಲ್ತಾರ್ ಹೊತ್ತೆ, ತೆ ನಸ್ತಾನಾ ಪೈಲೆಚೆ ಕರಾರಾತ್ ಥವ್ತಲಿ ಕರಾರಾಚಿ ಪೆಟಿ ಹೊತ್ತಿ, ತೆಕಾ ಸೊನ್ಯಾಚಿ ತಗ್ಡಾ ಲಾವಲ್ಲಿ ಹೊತ್ತಿ, ತೆಚ್ಯಾ ಭುತ್ತುರ್ ಸೊನ್ಯಾಚ್ಯಾ ಆಯ್ದಾನಾತ್ ಥವಲ್ಲೊ ಮನ್ನಾ ಅನಿ ಎಕ್ನತ್ತ್ಯಾ ಎಕ್ ವೆಳಾರ್ ಪಾನಾ ಚಿಗ್ರುನ್ ಯೆಲ್ಲೊ ಆರೊನಾಚೊ ದಾಂಡೊ ಹೊತ್ತೊ, ಪೈಲೆಚಿ ಧಾ ಆಜ್ಞಾ ಲಿವಲ್ಲಿ ಹೊತ್ತಿ, ಗುಂಡ್ಯಾಂಚಿ ಫಳಿಯಾ ತ್ಯಾತುರ್ ಥವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:4
26 ತಿಳಿವುಗಳ ಹೋಲಿಕೆ  

ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.


ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.


ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.


ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,


ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಆಜ್ಞಾಶಾಸನಗಳ ಮಂಜೂಷ, ಅದರ ಗದ್ದಿಗೆಗಳು, ಕೃಪಾಸನ ಇವುಗಳನ್ನೂ


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.


ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು