Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:8 - ಕನ್ನಡ ಸತ್ಯವೇದವು C.L. Bible (BSI)

8 ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:8
10 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.


ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು