Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:16 - ಕನ್ನಡ ಸತ್ಯವೇದವು C.L. Bible (BSI)

16 ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡಿಸುವದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರೂ ಹೆಸರುಹೆಸರಾಗಿ ನೇವಿುಸಲ್ಪಟ್ಟರು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಕೂಟ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:16
6 ತಿಳಿವುಗಳ ಹೋಲಿಕೆ  

ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ಅಸಾಹೇಲನ ಮಗ ಯೋನಾತಾನ್, ಹಾಗು ತಿಕ್ವನ ಮಗ ಯಹ್ಜೆಯ ಎಂಬವರು ಮಾತ್ರ. ಈ ಅಭಿಪ್ರಾಯವನ್ನು ವಿರೋಧಿಸಿದರು. ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರನ್ನು ಬೆಂಬಲಿಸಿದರು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು.


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು