Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:6 - ಕನ್ನಡ ಸತ್ಯವೇದವು C.L. Bible (BSI)

6 ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿವಿುತ್ತ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:6
16 ತಿಳಿವುಗಳ ಹೋಲಿಕೆ  

“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.


ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,


ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ಇಸ್ರಯೇಲ್ ದೇವರ ವಿಧಿಗಳ ಬಗ್ಗೆ ಗೌರವವಿದ್ದವರೆಲ್ಲರು ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು, ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧವಾಗಿ ಕುಳಿತುಕೊಂಡಿದ್ದೆ;


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು.


ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು