Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:2 - ಕನ್ನಡ ಸತ್ಯವೇದವು C.L. Bible (BSI)

2 ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:2
33 ತಿಳಿವುಗಳ ಹೋಲಿಕೆ  

ಯೊಸೇಖ ಯೋದನಿಗೆ, ಯೋದನು ಯೊವಾನ್ನನಿಗೆ, ಯೊವಾನ್ನನು ರೇಸನಿಗೆ, ರೇಸನು ಜೆರುಬಾಬೇಲನಿಗೆ, ಜೆರುಬಾಬೆಲ್ ಸಲಥಿಯೇಲನಿಗೆ, ಸಲಥಿಯೇಲನು ಸೇರಿಯನಿಗೆ ಹುಟ್ಟಿದರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಬಾಬಿಲೋನಿಯರಿಂದ ಸೆರೆಯಾಳಾಗಿ ಒಯ್ಯಲ್ಪಟ್ಟ ಅರಸ ಯೆಕೊನ್ಯನ ವಂಶಜರು ಇವರು: ಯೆಕೊನ್ಯನಿಗೆ ಏಳು ಜನ ಗಂಡುಮಕ್ಕಳು: ಶೆಯಲ್ತೀಯೇಲ್,


ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ಪೆದಾಯನಿಗೆ ಜೆರುಬ್ಬಾಬೆಲ್ ಮತ್ತು ಶಿಮ್ಮೀ ಎಂಬಿಬ್ಬರು ಮಕ್ಕಳಿದ್ದರು. ಜೆರುಬ್ಬಾಬೆಲನಿಗೆ ಮೆಷುಲ್ಲಾಮ್, ಹನನ್ಯ ಎಂಬ ಇಬ್ಬರು ಗಂಡುಮಕ್ಕಳು ಹಾಗೂ ಶೆಲೋಮೀತ್ ಎಂಬ ಮಗಳೂ ಇದ್ದಳು.


“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.


ಇಮ್ಮೇರನ ಸಂತಾನದವರಾದ ಹನಾನೀ, ಜೆಬದ್ಯ;


ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಹಾಗು ಉಜ್ಜೀಯ;


ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಹಾಗು ಎಲ್ಲಾಸ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು