Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:7
20 ತಿಳಿವುಗಳ ಹೋಲಿಕೆ  

ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.


ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.


ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,


ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,


ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು