ಎಜ್ರ 3:9 - ಕನ್ನಡ ಸತ್ಯವೇದವು C.L. Bible (BSI)9 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಸಹೋದರರು, ಕದ್ಮೀಯೇಲನು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು. ಅಧ್ಯಾಯವನ್ನು ನೋಡಿ |
ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.