Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ - ನಿಮ್ಮೊಡನೆ ಕಟ್ಟುವದಕ್ಕೆ ನಮಗೂ ಅಪ್ಪಣೆಯಾಗಲಿ; ಯಾಕಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರಾಗಿದ್ದೇವೆ; ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಾರ್ಪಣೆಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:2
19 ತಿಳಿವುಗಳ ಹೋಲಿಕೆ  

ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.


ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II


ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು