Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:24 - ಕನ್ನಡ ಸತ್ಯವೇದವು C.L. Bible (BSI)

24 ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಂದಿನಿಂದ ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದವರೆಗೂ ಯೆರೂಸಲೇವಿುನ ದೇವಾಲಯವನ್ನು ಕಟ್ಟುವ ಕೆಲಸವು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ತನಕ ಕೆಲಸವು ಮುಂದುವರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:24
19 ತಿಳಿವುಗಳ ಹೋಲಿಕೆ  

ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.


ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.


ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.


ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;


ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:


ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.


ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು.


ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.


“ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.


ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು