ಎಜ್ರ 4:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಜೆರುಬ್ಬಾಬೆಲ್, ಯೇಷೂವ ಇವರೂ ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ - ನೀವು ನಮ್ಮ ದೇವರ ಆಲಯವನ್ನು ಕಟ್ಟುವದರಲ್ಲಿ ನಮ್ಮೊಡನೆ ಸೇರಲೇ ಕೂಡದು; ಪಾರಸಿಯ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನೆಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕೆಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು. ಅಧ್ಯಾಯವನ್ನು ನೋಡಿ |
ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.