Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:12
28 ತಿಳಿವುಗಳ ಹೋಲಿಕೆ  

“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು