Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:3 - ಕನ್ನಡ ಸತ್ಯವೇದವು C.L. Bible (BSI)

3 ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:3
12 ತಿಳಿವುಗಳ ಹೋಲಿಕೆ  

ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.


ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.


ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು