Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:13 - ಕನ್ನಡ ಸತ್ಯವೇದವು C.L. Bible (BSI)

13 ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟದರಿಂದ ಹೊಳೆಯ ಈಚೆಯ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:13
9 ತಿಳಿವುಗಳ ಹೋಲಿಕೆ  

“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.


ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.


ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.


ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.


ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.


ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.


ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು