Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:28 - ಕನ್ನಡ ಸತ್ಯವೇದವು C.L. Bible (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:28
15 ತಿಳಿವುಗಳ ಹೋಲಿಕೆ  

ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.


ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು.


ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:


ಕರುಣೆತೋರುವವನಾರೂ ಅವನಿಗಿಲ್ಲವಾಗಲಿ I ಅವನ ತಬ್ಬಲಿ ಮಕ್ಕಳನಾರೂ ಕನಿಕರಿಸದಿರಲಿ II


ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು