Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:23 - ಕನ್ನಡ ಸತ್ಯವೇದವು C.L. Bible (BSI)

23 ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:23
18 ತಿಳಿವುಗಳ ಹೋಲಿಕೆ  

ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು