Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:10 - ಕನ್ನಡ ಸತ್ಯವೇದವು C.L. Bible (BSI)

10 ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆ ಮಾಡಿಕೊಳ್ಳೋಣ! ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವಕಟಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ದೇವರೇ, ಈಗ ನಾವು ನಿನಗೆ ಏನು ಹೇಳೋಣ? ನಾವು ನಿನಗೆ ವಿಧೇಯರಾಗುವುದನ್ನು ನಿಲ್ಲಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:10
10 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಸರ್ವೇಶ್ವರಾ, ಇಸ್ರಯೇಲರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ! ನಾನು ಏನು ತಾನೇ ಹೇಳಲಿ!


ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು