Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:3 - ಕನ್ನಡ ಸತ್ಯವೇದವು C.L. Bible (BSI)

3 ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದನ್ನು ಕೇಳಿದೊಡನೆ ನನ್ನ ಮನಸ್ಸಿನ ದುಃಖವನ್ನು ತೋರಿಸುವಂತೆ ನನ್ನ ಬಟ್ಟೆಯನ್ನು ಹರಿದು ಹಾಕಿದೆನು. ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕೆದರಿಕೊಂಡು ದಿಗ್ಭ್ರಮೆಗೊಂಡವನಾಗಿಯೂ ಬೇಸರಗೊಂಡವನಾಗಿಯೂ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:3
21 ತಿಳಿವುಗಳ ಹೋಲಿಕೆ  

ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.


ಯಾಜಕರು ತಲೆ ಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಿಕೊಳ್ಳಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು;


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು