Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೆ ತುಮ್ಕಾಬಿ ಲಾಗುಹೊತಾ ತುಮಿ ಖರ್‍ಯಾ ಶಿಕಾಪಾಚ್ಯಾ ವಿಶಯಾತ್ ಮಟ್ಲ್ಯಾರ್ ತುಮ್ಚ್ಯಾ ರಾಕ್ವನಿಚ್ಯಾ ವಿಶಯಾಚಿ ಬರಿ ಖಬರ್ ಆಯ್ಕುನ್ ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾಸಿ, ದೆವಾನ್ ಅಪ್ನಿ ದಿಲ್ಲ್ಯಾ ಗೊಸ್ಟಿ ಸಾರ್ಕೆ ಪವಿತ್ರ್ ಆತ್ಮೊ ದಿವ್ನ್ ತುಮ್ಚ್ಯಾ ವರ್ತಿ ವಿಶೆಸ್ ಛಪ್ಪೊ ಘಾಟಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:13
38 ತಿಳಿವುಗಳ ಹೋಲಿಕೆ  

ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು