Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಕ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್, ಅಮಿ ಧನ್ಯವಾದ್ ದಿವ್ಕ್ ಪಾಜೆ! ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಸರ್ಗಾತ್ ಸಗ್ಳಿ ಆತ್ಮಿಕ್ ಆಶಿರ್ವಾದಾ ತೆನಿ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:3
39 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು