Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾನಿಕ್ನಾ ಸುನ್ನತ್ ಕರುನ್ ಘೆವ್ ನಸಲ್ಲೆ ಮನುನ್ ಬಲ್ವುನ್ ಘೆತಲ್ಯಾ ಜಲ್ಮಿ ಜುದೆವ್ ನ್ಹಯ್ ಹೊವ್ನ್ ಅಸಲ್ಲ್ಯಾನು, ಅಪ್ನಾಕುಚ್ ಸುನ್ನತ್ ಕರ್ಸುನ್ ಘೆಟಲ್ಲೆ ತಸೆ ಮಟ್ಲ್ಯಾರ್ ಘೊವ್ಮಾನ್ಸಾನ್ ಅಪ್ನಾಚ್ಯಾ ಅಂಗಾಕ್ ಕರುನ್ಗೆಟಲ್ಲ್ಯಾ ವಿಶಯಾತ್ ಸಮುಂದ್ ಪಡಲೆ ಹಾಯ್ ಫಾಟಿ ತುಮಿ ಕಾಯ್ ಹೊವ್ನ್ ಹೊತ್ತ್ಯಾಸಿ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:11
29 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?


ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು