Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:13 - ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅತ್ತಾ ದೆವಾಕ್ನಾ ಧುರ್ ಹೊತ್ತ್ಯಾಕ್ನಿ ತುಮ್ಕಾ ಕ್ರಿಸ್ತಾಚ್ಯಾ ಬಲಿ ಹೊತಲ್ಯಾ ವೈನಾ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾನ್ ದೆವಾಚ್ಯಾ ಜಗೊಳ್ ಹಾನುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:13
41 ತಿಳಿವುಗಳ ಹೋಲಿಕೆ  

ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು