Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಅಸಲ್ಲ್ಯಾಕ್ನಿ ಎಕ್ ಕರುನ್ ಅಪ್ನಿಚ್ ಅಮ್ಚ್ಯಾ ಮದ್ದಿ ಸಮಾಧಾನ್ ಹಾನ್ಲ್ಯಾನ್ ಅಪ್ನಾಚ್ಯಾ ಸ್ವಂತ ಆಂಗಾನ್ ತೆಂಚ್ಯಾ ದೊಗಾಂಚ್ಯಾ ಮದ್ದಿ ಎಗ್ಳೆ ಕರುಕ್ ಮನುನ್ ಹೊತ್ತಿ ದುಶ್ಮನ್ಕಿಚಿ ಭಿತ್ತ್ ತೆನಿ ಫೊಡುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:14
28 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು