Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:20 - ಕನ್ನಡ ಸತ್ಯವೇದವು C.L. Bible (BSI)

20 ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮ್ಕಾಬಿ ಅಪೊಸ್ತಲಾನಿ ಅನಿ ಪ್ರವಾದಿಯಾನಿ ಘಾಟಲ್ಲ್ಯಾ ಪಾಯಾ ವೈರ್ ಕ್ರಿಸ್ತ್ ಜೆಜುಕ್ ಮಹತ್ವಾಚೊ ಗುಂಡೊ ಕರುನ್ ಭಾಂದೆಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:20
20 ತಿಳಿವುಗಳ ಹೋಲಿಕೆ  

ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು